ದೇರಳಕಟ್ಟೆ: ಮಂಗಳೂರು ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನಲ್ಲಿ ತಂಬಾಕು ಮುಕ್ತ ದಿನಾಚರಣೆ ಕಾರ್ಯಕ್ರಮ ಜರುಗಿತು.
ಮುಖ್ಯ ಅತಿಥಿಯಾಗಿ ಉಳ್ಳಾಲ ಪೊಲೀಸ್ ಠಾಣೆಯ ಎಸ್ ಐ ಸಂತೋಷ್ ಕುಮಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅವರು ಯುವ ಪೀಳಿಗೆ ಡ್ರಗ್ , ಮಾದಕವಸ್ತುಗಳ ದುರುಪಯೋಗ, ಸೈಬರ್ ಅಪರಾಧ , ಟ್ರಾಫಿಕ್ ರೂಲ್ಸ್, ಮತ್ತು ಹೆಲ್ಪ್ ಲೈನ್ ಬಗ್ಗೆ ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಟ್ರಸ್ಟಿ ಹಾಗೂ ಪ್ರವೇಶ ಮತ್ತು ಸಂಪರ್ಕ ನಿರ್ದೇಶಕರಾದ ಡಾ. ಅನಿತಾ ಟಿಟ್ಟೊ ಯುವಜನತೆ ಮತ್ತು ಮಾದಕವಸ್ತು ಬಳಕೆ ಸಾಮಾಜಿಕ ಚಟುವಟಿಕೆಗಳ ಮೇಲೆ ಬೀರುವ ದುಷ್ಪರಿಣಾಮದ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಬೀನಾ ಬೆನಿಟೊ ಡಿಸೋಜ ಮತ್ತು ಮಂಗಳೂರು ಕಾಲೇಜ್ ಆಪ್ ನರ್ಸಿಂಗ್ ನ ಪ್ರಾಂಶುಪಾಲೆ ಪ್ರೊ. ಮಲರ್ವಿಳಿ ಉಪಸ್ಥಿತರಿದ್ದರು. ರಾಷ್ಟ್ರ ಗೀತೆಯೊಂದಿಗೆ ಕಾರ್ಯಕ್ರಮವು ಮುಕ್ತಾಯವಾಯಿತು.


