ಲ್ಯಾಂಡ್ ಮಾರ್ಕ್ ಫೋರಮ್‌ನ ಅಂತರರಾಷ್ಟ್ರೀಯ ಕಾರ್ಯಾಗಾರದಲ್ಲಿ ಯು.ಟಿ. ಖಾದರ್ ಭಾಗಿ

Date:

ಬೆಂಗಳೂರು: ಲ್ಯಾಂಡ್ ಮಾರ್ಕ್ ಫೋರಮ್ ಸಂಸ್ಥೆ ಆಯೋಜಿಸಿರುವ ಅಂತರರಾಷ್ಟ್ರೀಯ ಮಟ್ಟದ ಕಾರ್ಯಾಗಾರವು ನವದೆಹಲಿಯ ಚಿನ್ಮಯ ಮಿಷನ್, ಲೋಧಿ ರೋಡ್, ರಾಮಕೃಷ್ಣ ಮಠದಲ್ಲಿ ನಡೆಯಲಿರುವುದು. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಮಾನ್ಯ ಶ್ರೀ ಯು.ಟಿ. ಖಾದರ್ ಅವರು ಈ ಮಹತ್ವದ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ.

ಈ ಕಾರ್ಯಾಗಾರವು ಏಪ್ರಿಲ್ 17 ರಿಂದ 21, 2026 ರವರೆಗೆ ಪ್ರತಿದಿನ ಬೆಳಗ್ಗೆ 8 ಗಂಟೆಯಿಂದ ರಾತ್ರಿ 11ರ ವರೆಗೆ ನಡೆಯಲಿದೆ. ವಿಶ್ವದ ವಿವಿಧ ದೇಶಗಳಿಂದ ಸುಮಾರು 200ಕ್ಕೂ ಹೆಚ್ಚು ಅಂತರ್ರಾಷ್ಟ್ರೀಯ ಪ್ರತಿನಿಧಿಗಳು ಭಾಗವಹಿಸಲಿದ್ದು, ನಾಯಕತ್ವ, ವ್ಯಕ್ತಿತ್ವ ವಿಕಾಸ, ಪರಿಣಾಮಕಾರಿ ಸಂವಹನ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತಂತೆ ಚರ್ಚೆಗಳು ನಡೆಯಲಿವೆ.

ಸ್ಪೀಕರ್ ಖಾದರ್ ಅವರ ಉಪಸ್ಥಿತಿ ಈ ಕಾರ್ಯಾಗಾರಕ್ಕೆ ವಿಶೇಷ ಮೆರಗು ತರುವುದಲ್ಲದೆ, ಅವರ ನಾಯಕತ್ವದ ಅನುಭವ ಮತ್ತು ಮಾರ್ಗದರ್ಶನವು ಯುವಕರಿಗೆ ಹಾಗೂ ಭಾಗವಹಿಸುವವರಿಗೆ ಪ್ರೇರಣೆಯಾಗಲಿದೆ. ಈ ಕಾರ್ಯಾಗಾರವು ಜಾಗತಿಕ ಮಟ್ಟದಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವ ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಪರಿವರ್ತನೆಗೆ ದಾರಿ ತೋರಿಸುವ ಮಹತ್ವದ ವೇದಿಕೆಯಾಗಿ ಹೊರಹೊಮ್ಮಲಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...