ಉಳ್ಳಾಲದಲ್ಲಿ ಸಂಭ್ರಮದ ಮೀಲಾದ್ ಕಾರ್ಯಕ್ರಮ ಮತ್ತು ರ‍್ಯಾಲಿ

Date:

ಉಳ್ಳಾಲ: ಉಳ್ಳಾಲ ಕೇಂದ್ರ ಜುಮ್ಮಾ ಮಸೀದಿ (402) ಹಾಗೂ ಸಯ್ಯಿದ್ ಮದನಿ ದರ್ಗಾ ಸಮಿತಿ ಇದರ ಆಶ್ರಯದಲ್ಲಿ ಲೋಕಾನುಗ್ರಹಿ ಮುಹಮ್ಮದ್ ಮುಸ್ತಫಾ (ಸ) ರವರ ಜನ್ಮ ದಿನ ಪ್ರಯುಕ್ತ ಬೃಹತ್ ಮೀಲಾದು ನ್ನಬಿ ರ್ಯಾಲಿ ಶುಕ್ರವಾರ ನಡೆಯಿತು.
ಕೋಡಿ ಜುಮಾ ಮಸೀದಿ ಖತೀಬ್ ಇರ್ಶಾದ್ ಸಖಾಫಿ ದುಆ ನೆರವೇರಿಸಿದರು. ರ್ಯಾಲಿ ಉದ್ಘಾಟಿಸಿ ಮಾತನಾಡಿದ ಸ್ಪೀಕರ್ ಯುಟಿ ಖಾದರ್ ಅವರು, ಶಾಂತಿ ಸೌಹಾರ್ದತೆಯನ್ನು ಸಾರಿದ ಪ್ರವಾದಿ ಮುಹಮ್ಮದ್ ( ಸ) ರವರ ಜೀವನ ನಮಗೆ ಮಾರ್ಗದರ್ಶನ ಆಗಿದೆ. ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಬದುಕು,ಸಮಾಜ ನಿರ್ಮಾಣ ಮಾಡಬೇಕು ಎಂದರು. ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋಟೆಪುರ ಮಸೀದಿಯಿಂದ ಉಳ್ಳಾಲ ದರ್ಗಾ ವರೆಗೆ ಕಾಲ್ನಡಿಗೆಯಲ್ಲಿ ಶಾಂತಿಯುತ ಮೀಲಾದ್ ರ್ಯಾಲಿ ನಡೆಯಿತು.ಐದು ಕರಿಯದ 28 ಮೊಹಲ್ಲಾ ಗಳ ವಿದ್ಯಾರ್ಥಿಗಳ ರ್ಯಾಲಿ ಯಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ದರ್ಗಾ ಉಪಾಧ್ಯಕ್ಷ ಅಶ್ರಫ್ ರೈಟ್ ವೇ,ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ, ಕೋಶಾಧಿಕಾರಿ ನಾಝಿಮ್ ರಹ್ಮಾನ್, ಮಾಜಿ ಉಪಾಧ್ಯಕ್ಷ ಮೋನು, ಮಾಜಿ ಅಧ್ಯಕ್ಷ ಯು.ಎಸ್.ಹಂಝ, ಸದಸ್ಯರಾದ ಮೇಲಂಗಡಿ, ಅಬ್ದುಲ್ ಖಾದರ್, ಝೈನುದ್ದೀನ್ ಮೇಲಂಗಡಿ,ಇಸ್ಹಾಕ್ ಮೇಲಂಗಡಿ ಅಬ್ದುಲ್ ಖಾದರ್ ಕೋಡಿ ,ಪಟ್ಲ ಮಸೀದಿ ಖತೀಬ್ ಮೊಹಮ್ಮದ್ ಫೈಝಿ ಮೋಙಂ ಪಟ್ಲ, ಅರೆಬಿಕ್ ಕಾಲೇಜು ಪ್ರೊಫೆಸರ್ ಇಬ್ರಾಹಿಂ ಅಹ್ಸನಿ, ನೌಮಾನ್ ನೂರಾನಿ, ನಜೀಮ್ ನೂರಾನಿ , ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಸಂಗರಸಭೆ ಕೌನ್ಸಿಲರ್ ಬಾಜಿಲ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು
ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ ಸ್ವಾಗತಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...