ಸುಪ್ರಿಂಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆತ ಎಸ್. ಎಮ್. ಎ ಖಂಡನೆ

Date:

ವಿಟ್ಲ: ಎಸ್ ಎಂ ಎ ಸೌತ್ ಜಿಲ್ಲಾ ಸಮಿತಿ ಇದರ ವಾರ್ಷಿಕ ಕೌನ್ಸಿಲ್ ಬಗ್ಗೆ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆ ಜಿಲ್ಲಾಧ್ಯಕ್ಷರಾದ ಯೂಸುಫ್ ಸಾಜ ಅಧ್ಯಕ್ಷತೆಯಲ್ಲಿ ದಾರುನ್ನ ಜಾತ್ ಟಿಪ್ಪುನಗರ ಸ್ಮಾರಕ ಭವನದಲ್ಲಿ ಜರುಗಿತು. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಬ್ಬಾಸ್ ಸೆರ್ಕಳ ಸ್ವಾಗತಿಸಿದರು, ಸಭೆ ಉದ್ಘಾಟಿಸಿ ಮಾತನಾಡಿದ ಎಸ್ ಎಂ ಎ ರಾಜ್ಯ ಉಪಾಧ್ಯಕ್ಷರಾದ ಹಾಜಿ ಅಬ್ದುಲ್ ಹಮೀದ್ ಕೊಡುಗಾಯಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಬಿ ಆರ್ ಗವಾಯಿಯವರ ಮೇಲೆ ಶೂ ಎಸದು ಇಡೀ ಭಾರತದ ನ್ಯಾಯಾಂಗ ವ್ಯವಸ್ಥೆಗೆ ಕಳಂಕ ತಂದು ಅಗೌರವ ತೋರಿದ ಅನಾಗರಿಕ ವಕೀಲನ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಇಂತಹ ಘಟನೆ ಇಡೀ ಭಾರತದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆ ಇಷ್ಟು ಬಲಿಷ್ಟವಾಗಿರುವಾಗ ವಕೀಲನೊಬ್ಬ ಕಾನೂನು ಹೇಳಬೇಕಾದವನು ಈ ರೀತಿ ಮಾಡಿರುವುದು ನ್ಯಾಯಾಂಗ ವ್ಯವಸ್ಥೆಯ ಗೌರವ ಕುಗ್ಗುವಂತೆ ಮಾಡಿದೆ. ಆದ್ದರಿಂದ ಅಂತ ನೀಚ ಕೆಲಸ ಮಾಡಿದ ವಕೀಲನನ್ನು ಕಠಿಣ ಶಿಕ್ಷೆಗೆ ಒಳಪಡಿಸಿ ಭಾರತದ ನ್ಯಾಯಾಂಗ ವ್ಯವಸ್ಥೆಯ ಗೌರವವನ್ನು ಇನ್ನಷ್ಟು ಗಟ್ಟಿಗೊಳಿಸಬೇಕು ಎಂದು ನುಡಿದರು ನಂತರ ಸಭೆಯಲ್ಲಿ ಒಕ್ಕರಳಿನಿಂದ ನ್ಯಾಯಾಧೀಶರ ವಿರುದ್ಧ ನಡೆದ ಕ್ರಮವನ್ನುಸಭೆ ಖಂಡಿಸಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಝಾಕ್ ಸಖಾಫಿ ವರದಿ ಹಾಗೂ ನಡೆದ ಕಾರ್ಯಕ್ರಮದ ವಿವರ ಮಂಡಿಸಿ ಸಭೆ ಅನುಮೋದಿಸಿತ್ತು ಸಭೆಯಲ್ಲಿ ಜಿಲ್ಲಾವಾರ್ಷಿಕ ಕೌನ್ಸಿಲ್25 ತಾರೀಕಿನಂದು ಮಂಗಳವಾರ ದಾರುನ್ನ ಜಾತ್ ಟಿಪ್ಪು ನಗರ ಸ್ಮಾರಕ ಭವನದಲ್ಲಿ ನಡೆಸಲು ತೀರ್ಮಾನಿಸಲಾಯಿತು. ಅದರಿಂದ ಮುಂಚಿತವಾಗಿ ರೀಜನಲ್ ಝೋನಲ್ ಸಮಿತಿಗಳ ವಾರ್ಷಿಕ ಕೌನ್ಸಿಲ್ ಬಹಳ ಯಶಸ್ವಿಯಾಗಿ ನಡೆಯಬೇಕು ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು ನಂತರ ಜಿಲ್ಲಾ ಉಪಾಧ್ಯಕ್ಷರಾದ ಅಬ್ದುಲ್ ಲತೀಫ್ ಸಖಾಫಿ ಪ್ರಾರ್ಥನೆ ನಡೆಸಿ ಸಭೆ ಮುಕ್ತಾಯಗೊಂಡಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...