ವಿಟ್ಲ : ಜಾಗದ ತಕರಾರು : ಕತ್ತಿಯಿಂದ ಹಲ್ಲೆ : ಮಹಿಳೆ ಗಂಭೀರ : ಆರೋಪಿ ಪೊಲೀಸ್ ವಶಕ್ಕೆ…!!

Date:

ವಿಟ್ಲ: ಜಾಗದ ವಿವಾದ ತಾರಕಕ್ಕೇರಿ ವ್ಯಕ್ತಿಯೊಬ್ಬ ಮಹಿಳೆಯೊಬ್ಬರ ಮೇಲೆ ಕತ್ತಿಯಿಂದ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡ ಆಕೆ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಕರಣಕ್ಕೆ ಸಂಭಂದಿಸಿ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಮಹಮ್ಮದ್‌ ಅಶ್ರಫ್‌ (32) ಎಂದು ಗುರುತಿಸಲಾಗಿದೆ

ಕೊಳ್ನಾಡು ಗ್ರಾಮದ ತಾಳಿತ್ತನೂಜಿ ನಿವಾಸಿ ಹಸೀನಾ (23) ಗಂಭೀರ ಗಾಯಗೊಂಡವರು.

ತಾಳಿತ್ತನೂಜಿ ನಿವಾಸಿ ಸುಲೈಮಾನ್‌ ಅವರ ಪ್ರಥಮ ಪತ್ನಿಯ ಪುತ್ರ ಮಹಮ್ಮದ್‌ ಅವರ ಪುತ್ರಿ ಹಸೀನಾ ಮೇಲೆ ದ್ವಿತೀಯ ಪತ್ನಿಯ ಪುತ್ರ ಮಹಮ್ಮದ್‌ ಅಶ್ರಫ್‌ ಕತ್ತಿಯಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದಾನೆಂದು ಆರೋಪಿಸಲಾಗಿದೆ.

ಮಹಿಳೆಯ ಕುತ್ತಿಗೆಗೆ ಕತ್ತಿ ಬೀಸುವ ಸಂದರ್ಭ ಕೈ ಅಡ್ಡ ತಂದಿದ್ದು, ಬೆರಳಿಗೆ ಗಂಭೀರ ಗಾಯವಾಗಿದೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ವಿಟ್ಲ ಪೊಲೀಸ್‌ ಠಾಣೆಯ ಉಪನಿರೀಕ್ಷಕ ರತ್ನಾಕರ ಹಾಗೂ ತಂಡ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...