ನ್ಯೂ ವೈಬ್ರೆಂಟ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಧ್ಯಾನ ದಿನಾಚರಣೆ

Date:

ಮೂಡಬಿದಿರೆ: ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜು, ಕಲ್ಲಬೆಟ್ಟು ಮೂಡುಬಿದಿರೆ ಇಲ್ಲಿ ಭಾನುವಾರ ವಿಶ್ವ ಧ್ಯಾನ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಸಂಸ್ಥೆಯಲ್ಲಿ ಬೆಳಗ್ಗೆ 8 ಗಂಟೆಯಿಂದ ಸುಮಾರು ಅರ್ಧ ಗಂಟೆಗಳ ಕಾಲ ಧ್ಯಾನವನ್ನು ವಿದ್ಯಾರ್ಥಿಗಳು ಅನುಸರಿಸಿದರು.

ಡಾ. ವೃಂದಾ ಬೆಡೇಕರ್ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನವೆಂದರೆ ಮನಸ್ಸನ್ನು ಶಾಂತಗೊಳಿಸಿ, ಏಕಾಗ್ರತೆ ಮತ್ತು ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಆಂತರಿಕ ಶಾಂತಿ, ಆತ್ಮಸ್ಥೈರ್ಯ ಮತ್ತು ಮಾನಸಿಕ ಸಮತೋಲನವನ್ನು ಪಡೆಯಲು ಸಹಾಯಕ ವಾಗುತ್ತದೆ. ಧ್ಯಾನವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ಧ್ಯಾನದ ಮಹತ್ವವನ್ನು ತಿಳಿ ಹೇಳಲಾಯಿತು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಟ್ರಸ್ಟಿಗಳಾದ ಮಹಮ್ಮದ್ ಭಾಷಾ, ಚಂದ್ರಶೇಖರ್ ರಾಜೇ ಅರಸ್, ಯೋಗೇಶ್ ಬೆಡೇಕರ್,ಸುಭಾಶ್ ಝಾ,ಡಾ. ಎಸ್ ಎನ್ ವೆಂಕಟೇಶ್ ನಾಯಕ್, ಡಾ. ಶರತ್ ಗೋರೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...