ಕೋಟೆಕಾರು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಜಮಾಲ್ ಅಜ್ಜಿನಡ್ಕ, ಮ್ಯಾಥ್ಯು ಡಿಸೋಜಾ ಆಯ್ಕೆ

Date:

ಮಂಗಳೂರು (ಜು 22): ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಬಿ ವಿಭಾಗದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಜಮಾಲ್ ಅಜ್ಜಿನಡ್ಕ ಪುನರಾಯ್ಕೆಗೊಂಡರೆ ಎ ವಿಭಾಗದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಮ್ಯಾಥ್ಯು ಡಿಸೋಜಾ ಆಯ್ಕೆಗೊಂಡರು.

ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಬೀರಿ ಮ್ಯಾರೇಜ್ ಮಹಲ್ ನಲ್ಲಿ ಉಳ್ಳಾಲ ಬ್ಲಾಕ್ ಅಧ್ಯಕ್ಷರಾದ ರಮೇಶ್ ಶೆಟ್ಟಿ ಬೋಳಿಯಾರ್ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾದ ಅಶ್ರಫ್ ಕೆಸಿ ರೋಡ್ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತಾನಾಡಿದ ರಮೇಶ್ ಶೆಟ್ಟಿ ಬೋಳಿಯಾರ್ ಪಕ್ಷ ಸಂಘಟನೆಯಲ್ಲಿ ಕೋಟೆಕಾರು ವಲಯ ಸಮಿತಿ ಮುಂದಿನ ದಿನಗಳಲ್ಲಿ ಕ್ಷೇತ್ರದ ಬಾಹುಳ್ಯವನ್ನು ಉಳಿಸಿ ಎಲ್ಲ ವಾರ್ಡ್ ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಗೊಳಿಸುವಲ್ಲಿ ಕಾರ್ಯಕರ್ತರು ಮತ್ತು ಬೂತ್ ಅಧ್ಯಕ್ಷರು ಹೆಚ್ಚಿನ ಶ್ರಮ ವಹಿಸಲು ಕರೆ ಕೊಟ್ಟರು.

ಅದೇ ರೀತಿ ಉಳ್ಳಾಲ ಕ್ಷೇತ್ರದ ಅಭಿವೃದ್ಧಿಯಲ್ಲಿ ಶಾಸಕರ ಶ್ರಮ ಮತ್ತು ಅಭಿವೃದ್ಧಿಯನ್ನು ಜನ ಮೆಚ್ಚಿ ಕೊಂಡ ಬಗ್ಗೆ ಹಾಗೂ ಕೋಟೆಕಾರು ವಲಯದಲ್ಲಿ ವಿದ್ಯುತ್ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ಹೆಚ್ಚಿನ ಪವರ್ ಸ್ಟೇಷನ್ ಗಳನ್ನು ಮಾಡುವಲ್ಲಿ ಗ್ರಾಮದ ಜನರಿಗೆ ಮತ್ತು ಕೋಟೆಕಾರು ಅಭಿವೃದ್ಧಿಗಾಗಿ ವಿವಿಧ ಕಾಮಗಾರಿಗಳನ್ನು ಮಾಡಲು ಹೆಚ್ಚಿನ ಅನುದಾನ ನೀಡಿ ಕೆಲಸ ಕಾರ್ಯಗಳನ್ನು ಮಾಡಿಸಿದ ಬಗ್ಗೆ ವಿವರಣೆ ನೀಡಿದರು.

ಈ ವೇಳೆ ಎಲ್ಲಾ ಹಳೇ ಸಮಿತಿಗಳನ್ನು ಬರ್ಖಾಸ್ತು ಮಾಡಿ ಹೊಸ ವಲಯ ಸಮಿತಿಗೆ ಎರಡು ವಿಭಾಗದಲ್ಲಿ ಅಧ್ಯಕ್ಷರುಗಳನ್ನು ಆಯ್ಕೆ ಮಾಡಲಾಯಿತು. ವಲಯ ಒಂದನೆ ವಿಭಾಗಕ್ಕೆ 7 ಬೂತ್ ಗಳ ವಲಯ ಸಮಿತಿ ಮತ್ತು ಎರಡನೆ ವಲಯ ಸಮಿತಿಗೆ 8 ಬೂತ್ ಗಳ ವಲಯ ಸಮಿತಿ ರಚನೆ ಮಾಡಲಾಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...